ಬಂದ್ ಕರೆಗೆ ಓಗೊಟ್ಟ ಕರ್ನಾಟಕ
ಬೆಂಗಳೂರು: ಬೆಳಗಾವಿ ಗಡಿ ವಿಷಯದಲ್ಲಿ
ಕೇಂದ್ರಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ
ಧೋರಣೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ನೀಡಿದ್ದ ಕರ್ನಾಟಕ
ಬಂದ್ ಕರೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಕೆಲವು ಕಡೆ ಕಲ್ಲು ತೂರಾಟದ ಘಟನೆಯನ್ನು
ಹೊರತು ಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು.
ಬೆಳಗಾವಿ, ಮೈಸೂರು, ಮಂಡ್ಯ, ಹಾಸನ, ಕೋಲಾರ, ತುಮಕೂರು,
ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಗುಲ್ಬರ್ಗ,
ಬಿಜಾಪುರ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಬಾಗಲಕೋಟೆಗಳಲ್ಲಿ ಬಂದ್
ಅತ್ಯಂತ ಯಶಸ್ವಿಯಾಗಿ ನಡೆಯಿತು.
ಉತ್ತರ ಕನ್ನಡ ಮತ್ತು ದಕ್ಷಿಣ
ಕನ್ನಡ ಜಿಲ್ಲೆಗಳಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳು ಮತ್ತು
ಮಹಾರಾಷ್ಟ್ರ ಏಕೀಕರಣ ಸಮಿತಿ(ಎಮ್ಇಎಸ್) ನಡುವೆ ನಡೆದ
ಘರ್ಷಣೆಯಲ್ಲಿ ೨೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಲ್ಲಿಯೂ ಕೂಡಾ ಅಲ್ಲಲ್ಲಿ ಕಲ್ಲು ತೂರಾಟ ನಡೆದು ಪೊಲೀಸರು
ಸಾ. ರಾ. ಗೋವಿಂದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್
ಪಾಟೀಲ್ ಸೇರಿದಂತೆ ಒಟ್ಟೂ ೩೫೦ ಜನರನ್ನು ಬಂಧಿಸಿದರು.