|
ಮಾನಸ ಯಾತ್ರಿಗಳಿಗೆ ಹೆಚ್ಚಿನ ಸಬ್ಸಿಡಿಯ ಸಾಧ್ಯತೆ
ಹುಬ್ಬಳ್ಳಿ: ರಾಜ್ಯದಿಂದ ಕೈಲಾಸ ಮಾನಸ ಸರೋವರ
ಯಾತ್ರಿಕರ ಸಂಖ್ಯೆ ಏರಿದಲ್ಲಿ ಸರಕಾರದ ವತಿಯಿಂದ ಇನ್ನೂ ಹೆಚ್ಚಿನ
ಸಬ್ಸಿಡಿ ನೀಡುವ ಕುರಿತು ಪರಿಶೀಲಿಸಲಾಗುವುದು. ಈಗಾಗಲೇ ಸರಕಾರ
ಪ್ರತಿ ಯಾತ್ರಿಕರಿಗೆ ೨೫ ಸಾವಿರ ರೂ. ಸಬ್ಸಿಡಿ ನೀಡುತ್ತಿದೆ ಎಂದು
ಕಂದಾಯ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಎಸ್.ಜಿ.ಎಲ್. ಟೂರ್ಸ್ ಆಂಡ್ ಟ್ರಾವಲ್ಸ್ ನಗರದ ಚೇಂಬರ್ ಆಫ್
ಕಾಮರ್ಸ್ ಸಭಾಂಗಣದಲ್ಲಿ ಶುಕ್ರವಾರ ಕೈಲಾಸ ಮಾನಸ
ಸರೋವರ ಛಾಯಾ ಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಿತ್ತು.
ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದ ಯಾತ್ರಿಗಳ ಸಂಖ್ಯೆ ಹೆಚ್ಚಾದಲ್ಲಿ ಮುಂದಿನ ಮುಂಗಡ
ಪತ್ರದಲ್ಲಿ ಸಬ್ಸಿಡಿಗಾಗಿ ಹೆಚ್ಚಿನ ಹಣ ಮೀಸಲಿಡಲಾಗುವುದು. ಅಲ್ಲದೆ
ರಾಜ್ಯದ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯ ಒದಗಿ ಸಲು ಸಹ
ಮುಂಗಡ ಪತ್ರದಲ್ಲಿ ಹೆಚ್ಚಿನ ಹಣ ಮೀಸಲಿರಿಸಲು ಉದ್ದೇಶಿಸಲಾಗಿದೆ
ಎಂದು ಶೆಟ್ಟರ್ ತಿಳಿಸಿದರು.
ಇನ್ನಷ್ಟು
ಸಾರಾಯಿ ವಿರುದ್ಧ `ಮತ'
ಪ್ರತಿಭಟನೆ
ಸಿಎಮ್ ಕಾರ್ಯವೈಖರಿ
ಟೀಕಿಸಿದ ಶಾಸಕರು
ರಾಜ್ಯದಲ್ಲಿ ೬೭ ಪದವಿ
ಕಾಲೇಜು ಸ್ಥಾಪನೆ
ನವಜೋತ್ ಸಿಧುಗೆ ೩
ವರ್ಷಗಳ ಶಿಕ್ಷೆ
ಮದುವೆಯಾಗಿ
ಮೋಸಹೋದ ಉ.ಕ ಹುಡುಗಿಯರು
ರಾಜ್ಯದ ಆರು ಜಿಲ್ಲೆಗಳಿಗೆ
೨,೬೮೯ ಕೋಟಿ ರೂ.
ಶಿಬು ಸೊರೇನ್ಗೆ ಜೀವಾವಧಿ
ಶಿಕ್ಷೆ
|