|
ಮುಲಾಯಂಗೆ `ಕೈ'ಕೊಟ್ಟ ಕಾಂಗ್ರೆಸ್
ಲಖನೌ: ಉತ್ತರ ಪ್ರದೇಶದ ಮುಲಾಯಂ ಸಿಂಗ್ ಯಾದವ್
ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಕಾಂಗ್ರೆಸ್ ವಾಪಸ್ಸು ಪಡೆದಿದೆ.

ಪಕ್ಷದ ರಾಜ್ಯಾಧ್ಯಕ್ಷ ಸಲ್ಮಾನ್ ಖುರ್ಷಿದ್ ಬುಧವಾರ ಸಂಜೆ ಕರೆದ
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಹೈ ಕಮಾಂಡ್ನಿಂದ
ಸೂಚನೆ ಪಡೆದ ನಂತರ ಈ ನಿರ್ಧಾರ ಮಾಡಲಾಗಿದೆ. ಗುರುವಾರ
ಬೆಳಿಗ್ಗೆ ರಾಜ್ಯಪಾಲ ಟಿ.ವಿ ರಾಜೇಶ್ವರ್ ಅವರನ್ನು ಭೇಟಿಮಾಡಿ
ಅಧಿಕೃತವಾಗಿ ಬೆಂಬಲವನ್ನು ಹಿಂದಕ್ಕೆ ಪಡೆಯುವುದಾಗಿ ಖುರ್ಷಿದ್
ತಿಳಿಸಿದ್ದಾರೆ.
ಮುಲಾಯಂ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ
ಅರಾಜಕತೆ, ಅನ್ಯಾಯಗಳು ಬೆಂಬಲವನ್ನು ಹಿಂತೆಗೆದು ಕೊಳ್ಳಲು
ಕಾರಣವಾಗಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಕೂಡಾ
ಹಾಜರಿದ್ದರು.
ಇನ್ನಷ್ಟು
ಎಎಕ್ಸ್ಎನ್ ಚಾನೆಲ್ ಮೇಲೆ
ಪ್ರತಿಬಂಧ
ಶಿಲ್ಪಾ ನಿಂದನೆ: ಗಂಭೀರವಾಗಿ
ಪರಿಗಣಿಸಿರುವ ಭಾರತ
ಜ.೨೩ರಂದು ರಾಜ್ಯ
ಚಲನಚಿತ್ರ ಪ್ರಶಸ್ತಿ ಸಮಾರಂಭ
ಕೀಬೋರ್ಡನಲ್ಲಿ ಗಿನ್ನೀಸ್
ದಾಖಲೆ ಮಾಡಿದ ಪ್ಯಾಟ್ರಿಕ್ಸ್
ತಮಿಳುನಾಡು ಶಾಲೆಗಳಲ್ಲಿ
ದೈಹಿಕ ಶಿಕ್ಷೆ ನಿಷಿದ್ಧ
ದೇಶದ ನಿಧಾನಗತಿಗೆ
ಅಧಿಕಾರಶಾಹಿ ಕಾರಣ: ಮೂರ್ತಿ
|