|
ಗಲಭೆ ನಿಯಂತ್ರಿಸಲು ನೂತನ ಕಾನೂನು:ಸಿಎಂ
ಬೆಂಗಳೂರು: ಯಾವುದೇ ಕಾರ್ಯಕ್ರಮದ ವೇಳೆ
ಸಾಮಾನ್ಯ ಜನಜೀವನಕ್ಕೆ ತೊಂದರೆ, ಸಾರ್ವಜನಿಕ ಆಸ್ತಿಪಾಸ್ತಿಗೆ
ನಷ್ಟವಾಗುವ ರೀತಿಯಲ್ಲಿ ಗಲಭೆ ನಡೆದಾಗ ಕಾರ್ಯಕ್ರಮದ
ಸಂಘಟಕರನ್ನು ಹೊಣೆಯಾಗಿಸಿ ಕಾನೂನು ಕ್ರಮ ಜರುಗಿಸಲು
ಸರಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಗಲಭೆ, ಜೀವಹಾನಿ, ಸಾರ್ವಜನಿಕ ಆಸ್ತಿಯ
ನಷ್ಟಕ್ಕೆ ಖೇದ ವ್ಯಕ್ತಪಡಿಸಿರುವ ಅವರು ಇಂತಹ ಘಟನೆಗಳಿಗೆ
ಕ್ಷಮೆ ಇಲ್ಲ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ
ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು. ಅವರು ಹೊಳೆ
ನರಸೀಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಈ ಕುರಿತು ಕಾನೂನು ರೂಪಿಸಲಾಗುವುದು. ಮುಂದಿನ
ಅಧಿವೇಶನದಲ್ಲಿಯೇ ಈ ವಿಧೇಯಕಕ್ಕೆ ಅನುಮೋದನೆ ಪಡೆಯಲು
ಸರಕಾರ ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಅನಗತ್ಯವಾಗಿ ಈಗ ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ
ಪ್ರೇರಿತ. ಪ್ರತಿಭಟನೆ ನೆಪದಲ್ಲಿ ಗಲಭೆ ಸೃಷ್ಟಿಸಿ ಜನತೆಯ ಸಾವು
ನೋವುಗಳಲ್ಲಿ ಸಂತಸ ಅನುಭವಿಸುವ ವಿಕೃತ ಮನಸ್ಸುಗಳಿಗೆ
ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಅವರು ನುಡಿದರು.
ಇನ್ನಷ್ಟು
ಎಎಕ್ಸ್ಎನ್ ಚಾನೆಲ್ ಮೇಲೆ
ಪ್ರತಿಬಂಧ
ಶಿಲ್ಪಾ ನಿಂದನೆ: ಗಂಭೀರವಾಗಿ
ಪರಿಗಣಿಸಿರುವ ಭಾರತ
ಜ.೨೩ರಂದು ರಾಜ್ಯ
ಚಲನಚಿತ್ರ ಪ್ರಶಸ್ತಿ ಸಮಾರಂಭ
ಕೀಬೋರ್ಡನಲ್ಲಿ ಗಿನ್ನೀಸ್
ದಾಖಲೆ ಮಾಡಿದ ಪ್ಯಾಟ್ರಿಕ್ಸ್
ತಮಿಳುನಾಡು ಶಾಲೆಗಳಲ್ಲಿ
ದೈಹಿಕ ಶಿಕ್ಷೆ ನಿಷಿದ್ಧ
ದೇಶದ ನಿಧಾನಗತಿಗೆ
ಅಧಿಕಾರಶಾಹಿ ಕಾರಣ: ಮೂರ್ತಿ
|