Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 13 April 2007 11:18 AM

ಮತ್ತೆ ಟ್ರೈಮಿಸ್ಟರ್...

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಂದ ಸಾಕಷ್ಟು ದೂರುಗಳಿದ್ದರೂ ಸಹ ಈ ವರ್ಷವೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತ್ರೈಮಾಸಿಕ ಪದ್ಧತಿಯನ್ನು ಮುಂದುವರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.
 

ಶಿಕ್ಷಕರಿಗೆ ಅಧಿಕ ಹೊರೆಯಾಗುತ್ತಿರುವುದರಿಂದ ನಿಗದಿತ ಅವಧಿಯಲ್ಲಿ ಪಾಠ ಮುಗಿಸಲಾಗುತ್ತಿಲ್ಲ ಎಂದು ಶಿಕ್ಷಕ ವರ್ಗ ಅಸಮಾಧಾನ ವ್ಯಕ್ತಪಡಿಸಿತ್ತು.
 

ಈ ಪದ್ಧತಿಯಲ್ಲಿ ಶಿಕ್ಷಕರಿಗೆ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಶಿಕ್ಷಕರಲ್ಲಿ ಜ್ಞಾನದ ಕೊರತೆ ಇದೆ, ಆದ್ದರಿಂದ ಶಿಕ್ಷಕರಲ್ಲಿ ಹೆಚ್ಚಿನ ಅರಿವು ಮೂಡಿಸುವತ್ತ ಶಿಕ್ಷಣ ಇಲಾಖೆ ಗಮನ ಹರಿಸಬೇಕೆಂದು ಶಿಕ್ಷಣ ತಜ್ಞರು ಸಲಹೆ ನೀಡಿದ್ದರು.
 

ಮಕ್ಕಳು ಪ್ರತಿದಿನ ಪರೀಕ್ಷೆಯ ಭಯದಲ್ಲೇ ಇರುವಂತಾಗಿದೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಪರಿಶೀಲಿಸುವುದಾಗಿ ಹೇಳಿದ್ದ ಶಿಕ್ಷಣ ಸಚಿವ ಹೊರಟ್ಟಿಯವರು ಈಗ ಮತ್ತದೇ ಟ್ರೈಮಿಸ್ಟರ್ ಪದ್ಧತಿಯ ಮೊರೆ ಹೋಗಿದ್ದಾರೆ.

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com