Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಕಾಂಗ್ರೆಸ್‌ಗೆ ತಿರುಗುಬಾಣವಾದ `ಗಣಿಲಂಚ

ಮುಖ್ಯಮಂತ್ರಿಯಿಂದ ಧರಂಸಿಂಗ್ ಮೇಲೆ ಆರೋಪ

 

ಬೆಂಗಳೂರು: ಪ್ರತಿ ಪಕ್ಷ ನಾಯಕರಾದ ಧರ್ಮಸಿಂಗ್ ಅವರು ೨೦ ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗಲೇ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಾದ್ಯಂತ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆಂದು ಹೇಳುವ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

 

ಕಳೆದ ಹಲವಾರು ದಿನಗಳಿಂದ ಪ್ರತಿಪಕ್ಷ ಕಾಂಗ್ರೆಸ್‌ನ ಸದಸ್ಯರು `ಗಣಿಲಂಚ' ಪ್ರಕರಣವನ್ನು ಉಲ್ಲೇಖಿಸಿ ಮಾಡುತ್ತಿರುವ ಧರಣಿಯಿಂದ ವೃಥಾ ಕಾಲಾಹರಣವಾಯಿತೇ ವಿನಃ ಯಾವುದಕ್ಕೂ ಪ್ರಯೋಜನವಾಗಲಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಅಲವತ್ತುಕೊಂಡಿದ್ದಾರೆ.

 

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ಅನ್ನು ಚರ್ಚೆ ಇಲ್ಲದೇ ಅಂಗೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ನೇತೃತ್ವದಲ್ಲಿ ಸರ್ಕಾರ ರಚನೆಯಾದ ದಿನದಿಂದಲೂ ಕಾಂಗ್ರೆಸ್ ಪಕ್ಷದವರು ಕಲಾಪ ಸರಿಯಾಗಿ ನಡೆಸಲು ಅವಕಾಶವೇ ಕೊಟ್ಟಿಲ್ಲ ಮತ್ತು ಕೇವಲ ಧರಣಿಯಲ್ಲಿಯೇ ಹೆಚ್ಚಿನ ಸಮಯ ಕಳೆದಿದೆ ಎಂದು ಆರೋಪಿಸಿದರು.

 

ತೀವ್ರ ಚರ್ಚೆಗೆ ಗ್ರಾಸವಾಗಿರುವ ಗಣಿ ಲಂಚಕ್ಕೆ ಸಂಬಂಧಿಸಿದಂತೆ ನಾವು ಸದನದಲ್ಲಿ ಉತ್ತರ ನೀಡಲು ಸಿದ್ಧರಾಗಿದ್ದರೂ ಸಹ ಧರಣಿ ನಿರತ ಕಾಂಗ್ರೆಸ್ ಶಾಸಕರಿಂದಾಗಿ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ, ಎಂದು ಅವರು ಟೀಕಿಸಿದರು.

 

"ಗಣಿ ಲಂಚ ಪ್ರಕರಣದಲ್ಲಿ ನನಗಿಂತಲೂ ಹೆಚ್ಚಾಗಿ ಭಯಪಡುತ್ತಿರುವುದು ಕಾಂಗ್ರೆಸ್ ಪಕ್ಷ. ಯಾಕೆಂದರೆ ನನ್ನ ಉತ್ತರದಿಂದ ಅವರ ಹುಳುಕು ಎಲ್ಲಿ ಹೊರಬೀಳುವುದೋ ಎನ್ನುವ ಭಯದಿಂದಲೇ ಅವರು ಈ ರೀತಿ ವರ್ತಿಸುತ್ತಿದ್ದಾರೆ" ಎಂದು ಕಟಕಿಯಾಡಿದ್ದಾರೆ.

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com