Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 31 October 2006 02:27 AM

ಸಾಹಿತಿ ಕಂಬಾರರಿಗೆ `ಆಳ್ವಾಸ್ ನುಡಿಸಿರಿ ೨೦೦೬' ಸಾರಥ್ಯ

ಮೂಡಬಿದಿರೆ : ನವೆಂಬರ್ ೨೪ರಿಂದ ೨೬ರ ತನಕ ಇಲ್ಲಿನ ವಿದ್ಯಾ ಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಲ್ಲಿ ನಡೆಯಲಿರುವ `ಆಳ್ವಾಸ್ ನುಡಿಸಿರಿ-೨೦೦೬' ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಕವಿ, ನಾಟಕಕಾರ, ಜಾನಪದ ವಿದ್ವಾಂಸ ಡಾ. ಚಂದ್ರಶೇಖರ ಕಂಬಾರ ಅವರು ಆಯ್ಕೆಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ.

ಆಧುನಿಕ ಕನ್ನಡ ಸಾಹಿತ್ಯದಲ್ಲಿ ದೇಸೀಯ ಸಂಸ್ಕೃತಿಯ ಸತ್ವವನ್ನು ಶಕ್ತಿಶಾಲಿಯಾಗಿ ಬರವಣಿಗೆಗೆ ತಂದಿರುವ ಕಂಬಾರರು ಒಟ್ಟು ೨೨ ನಾಟಕಗಳು, ೮ ಕವನ ಸಂಕಲನಗಳು ಮತ್ತು ೪ ಕಾದಂಬರಿಗಳನ್ನು ರಚಿಸಿದ್ದಾರೆ. ಅಲ್ಲದೆ ಚಕೋರಿ ಎಂಬ ಮಹಾಕಾವ್ಯ, ಜಾನಪದ, ರಂಗಭೂಮಿ, ಸಾಹಿತ್ಯ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ೧೪ ಸಂಶೋಧನಾ ಕೃತಿಗಳನ್ನೂ ರಚಿಸಿದ್ದಾರೆ. ಹಂಪಿಯ ಕನ್ನಡ ವಿ.ವಿ.ಯ ಸ್ಥಾಪಕ ಕುಲಪತಿಗಳಾಗಿ ಕರ್ತವ್ಯ ನಿರ್ವಹಿಸಿದ ಕಂಬಾರರು ಪ್ರಸ್ತುತ ವಿಧಾನಪರಿಷತ್ ಸದಸ್ಯರು. ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷತೆ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷತೆ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ, ರಂಗಾಯಣಗಳ ಸದಸ್ಯತ್ವದ ಗೌರವಗಳು ಇವರಿಗೆ ಸಂದಿವೆ. ಚಿಕಾಗೋ, ನ್ಯೂಯಾರ್ಕ್, ಬರ್ಲಿನ್, ಮಾಸ್ಕೋ, ಜಪಾನ್ ಮುಂತಾದೆಡೆಗಳ ಕೆಲವು ವಿ.ವಿ.ಗಳಲ್ಲಿ ಜಾನಪದ ಮತ್ತು ರಂಗಭೂಮಿ ಕುರಿತ ಉಪನ್ಯಾಸಗಳನ್ನು ನೀಡಿರುವ ಕಂಬಾರರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಆಶಾನ್ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಪಂಪ ಪ್ರಶಸ್ತಿ, ಪದ್ಮಶ್ರೀ, ಕಬೀರ್ ಸಮ್ಮಾನ್ ಮುಂತಾದ ಪ್ರತಿಷ್ಠಿತ ಗೌರವ ಸಂದಿವೆ.

ಇವರ ಅನೇಕ ಕೃತಿಗಳು ಹಿಂದಿ, ಇಂಗ್ಲೀಷ್ ಸಹಿತ ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಕೆಲವು ಕೃತಿಗಳು ಚಲನಚಿತ್ರ, ಕಿರುಚಿತ್ರ ಮತ್ತು ಟಿವಿ ಧಾರಾವಾಹಿಗಳಾಗಿ ಜನಪ್ರಿಯತೆ ಗಳಿಸಿವೆ.

ಇನ್ನಷ್ಟು

ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ

ಮತಾಂಧರಿಂದ ಹತ್ತಿ ಉರಿಯುತ್ತಿರುವ ಮಂಗಳೂರು

ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ

ಎಓಎಲ್ ಸಂಸ್ಥೆಯಿಂದ ಹೊಸ ಬ್ರೌಸರ್ ಬಿಡುಗಡೆ

ಬರಹೇನ್‌ನಲ್ಲಿ ೩ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ಕೃಷಿಗಾಗಿ ಮಹೀಂದ್ರಾ ಯಿಂದ ೪೦೦ ಕೋ. ಹೂಡಿಕೆ

ಕೇಂದ್ರದಿಂದ ಹೊಸ ಇಪ್ಪತ್ತು ಅಂಶಗಳ ಕಾರ್ಯಕ್ರಮ

ಶಿಕ್ಷಣ ಇಲಾಖೆಗೂ ಇ-ಆಡಳಿತ

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com